ಉಡುಪಿ ಜಿಲ್ಲೆ ಶಾಂತ: ಎಸ್ಪಿ ನಿಶಾ ಜೇಮ್ಸ್

Update: 2019-12-19 18:25 GMT

ಉಡುಪಿ, ಡಿ.19: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಭಾರತ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ವಿಧಿಸಲಾಗಿ ರುವ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ನಡೆದಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ತಿಳಿಸಿದ್ದಾರೆ.

ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಿಧಿಸಲಾಗಿದ್ದು, ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದ್ದಾರೆ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟಿಸುವ ಯಾವುದೇ ಘಟನೆಗಳು ಉಡುಪಿ ಜಿಲ್ಲೆಯಲ್ಲಿ ನಡೆದಿಲ್ಲ. ಎಲ್ಲ ಸಂಘಟನೆಗಳು, ಪಕ್ಷದವರು ಸಹಕಾರ ನೀಡಿದ್ದು, ಜಿಲ್ಲೆಯಲ್ಲಿ ಶಾಂತಿ ಕಾಪಾಡಲಾಗಿದೆ ಎಂದರು.

ಈ ಸಂಬಂಧ ಉಡುಪಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಮಲ್ಪೆ, ಹೂಡೆ, ಕುಂದಾಪುರ, ಗಂಗೊಳ್ಳಿ, ಕಂಡ್ಲೂರು ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸ ಲಾಗಿದೆ. ನಾಳೆಯವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಎಸ್ಪಿ ಪತ್ರಿಕೆಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News