ಮಂಗಳೂರು : ಜುಮಾ ನಮಾಜ್ ಗಾಗಿ ಕರ್ಫ್ಯೂ ಸಡಿಲಿಕೆ

Update: 2019-12-20 06:03 GMT

ಮಂಗಳೂರು, ಡಿ. 20 : ಮಂಗಳೂರು ನಗರ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ಕರ್ಫ್ಯೂ ನಲ್ಲಿ ಶುಕ್ರವಾರ ಜುಮಾ ನಮಾಝ್ ಮಾಡಲು ಅವಕಾಶ ನೀಡುವ ಉದ್ದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಮುಸ್ಲಿಮರು ಜುಮಾ ನಮಾಝ್ ಗೆ ಮಸೀದಿಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಜುಮಾ ನಮಾಝ್ ನಿರ್ವಹಿಸಿ ಬಳಿಕ  ಆದಷ್ಟು ಬೇಗ ಅಲ್ಲಿಂದ ತಮ್ಮ ತಮ್ಮ ಮನೆಗಳಿಗೆ ಮರಳಬೇಕು ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News