ಮಂಗಳೂರು ಗೋಲಿಬಾರ್: ಎಸ್‌ಕೆಎಸ್‌ಎಂ ಖಂಡನೆ

Update: 2019-12-20 16:28 GMT

ಮಂಗಳೂರು, ಡಿ. 20: ನಗರದಲ್ಲಿ ಗುರುವಾರ ವಿದ್ಯಾರ್ಥಿಗಳು, ಮಹಿಳೆಯರ ಸಹಿತ ಅಮಾಯಕರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್, ಲಾಠಿಚಾರ್ಜ್ ಮತ್ತು ಇತರ ದೌರ್ಜನ್ಯವನ್ನು ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಮಂಗಳೂರು (ಎಸ್‌ಕೆಎಸ್‌ಎಂ) ತೀವ್ರವಾಗಿ ಖಂಡಿಸಿದೆ.

ಮುಂದಿನ ದಿನಗಳಲ್ಲಿ ಸಮುದಾಯದ ನಾಯಕರು ಅಥವಾ ಸಂಘಟನೆಗಳ ಒಕ್ಕೂಟ ಗೊತ್ತುಪಡಿಸುವ ದಿನದಂದು ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಎಲ್ಲ ಸಮುದಾಯದವರಿಗೂ ಈ ಕರಾಳ ಕಾಯ್ದೆಯಿಂದಾಗುವ ಅನಾಹುತಗಳನ್ನು ಮನವರಿಕೆ ಮಾಡಿಕೊಡಲಿದ್ದೇವೆ. ಸರ್ವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಎಸ್‌ಕೆಎಸ್‌ಎಂ ಅಧ್ಯಕ್ಷ ಬಶೀರ್ ಅಹ್ಮದ್ ಶಾಲಿಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News