ಸಿದ್ದರಾಮಯ್ಯ ನೇತೃತ್ವದಲ್ಲಿ 5 ಲಕ್ಷ ರೂ, ಜಿಲ್ಲಾ ಕಾಂಗ್ರೆಸ್‌ನಿಂದ 2.5 ಲಕ್ಷ ರೂ.ನ ಚೆಕ್ ವಿತರಣೆ

Update: 2019-12-23 09:42 GMT

ಮಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್‌ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಝಮೀರ್ ಅಹ್ಮದ್ ಸೋಮವಾರ ಮಧ್ಯಾಹ್ನ ಭೇಟಿ ನೀಡಿದರು.

ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ಲಕ್ಷ ರೂ.ನ ಚೆಕ್ ವಿತರಿಸಿದರು. ಇದೇ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ 2.5 ಲಕ್ಷ ರೂ.ನ ಚೆಕ್ ಹಸ್ತಾಂತರಿಸಲಾಯಿತು.

ಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಐವನ್ ಡಿಸೋಜ, ಹರೀಶ್ ಕುಮಾರ್, ಕಾರ್ಪೊರೇಟರ್‌ಗಳಾದ ಪ್ರವೀಣ್‌ಚಂದ್ರ ಆಳ್ವ, ವಿನಯರಾಜ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಜಿ.ಎ.ಬಾವ, ಲತೀಫ್ ಕಂದಕ್, ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News