ಸ್ಕೂಟಿ ಸ್ಕಿಡ್: ಸವಾರ ಮೃತ್ಯು
Update: 2019-12-24 16:49 GMT
ಕಾರ್ಕಳ, ಡಿ.24: ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿ ಡಿ.23ರಂದು ಅಪರಾಹ್ನ ವೇಳೆ ಸ್ಕೂಟಿಯೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಪ್ರಶಾಂತ್ ಪೂಜಾರಿ (29) ಎಂದು ಗುರುತಿಸಲಾಗಿದೆ. ಇವರು ಸ್ಕೂಟಿಯಲ್ಲಿ ಕಾರ್ಕಳ ಕಡೆಯಿಂದ ಪಳ್ಳಿ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬಸ್ಸನ್ನು ನೋಡಿ ಒಮ್ಮೆಲೆ ಬ್ರೇಕ್ ಹಾಕಿದರು. ಇದರ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಪೂಜಾರಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.