ಮಂಗಳೂರು ಹಿಂಸಾಚಾರ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

Update: 2019-12-25 04:35 GMT

ಮಂಗಳೂರು, ಡಿ.25: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ, ಪಿತೂರಿ ಇರುವುದು ಸ್ಪಷ್ಟವಾಗಿದೆ. ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಮಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನ, ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಿ ನಾಶಪಡಿಸಿದವರನ್ನು ಕೂಡಲೇ ಬಂಧಿಸಲಾಗುವುದು. ಯಾರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಮಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಬೇಕು. ಕರಾವಳಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News