ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ?

Update: 2019-12-26 08:58 GMT

ಹೊಸದಿಲ್ಲಿ, ಡಿ.26: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಇದೀಗ ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಹಲವು ಮಂದಿ ಆಕಾಂಕ್ಷಿಗಳು ಲಾಭಿ ನಡೆಸಿದ್ದಾರೆ.

ಈ ನಡುವೆ  ಸಚಿವ ಡಿ.ಕೆ.ಶಿವಕುಮಾರ್  ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ್ದು, ಶೀಘ್ರವೇ ಆದೇಶ ಹೊರಬೀಳಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News