ಕಡಬ: ರೈಲಿನಡಿಗೆ ಬಿದ್ದು ಪಂಜದ ಯುವಕ ಮೃತ್ಯು

Update: 2019-12-31 04:02 GMT

ಕಡಬ, ಡಿ.31. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ನಡೆದಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಮೃತಪಟ್ಟವರು. ಮಂಗಳವಾರ ಬೆಳಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ರ ಮೃತದೇಹ ಕಂಡುಬಂದಿದೆ. ಮೃತದೇಹದ ಪಕ್ಕದಲ್ಲೇ ಮದ್ಯದ ಬಾಟಲೊಂದು ಬಿದ್ದುಕೊಂಡಿತ್ತು. ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಕೆಳಗಡೆ ಬಿದ್ದಿದ್ದು, ಈ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News