ಅಸಹಕಾರ ಚಳುವಳಿಯ ದಿನಾಂಕ ಅಂತಿಮಗೊಳಿಸಿಲ್ಲ: ಮುಹಮ್ಮದ್ ಮಸೂದ್

Update: 2019-12-31 11:44 GMT

ಮಂಗಳೂರು, ಡಿ.31: ಎನ್‌ಆರ್‌ಸಿ ಮತ್ತು ಸಿಎಎ ಕುರಿತು ಅಸಹಕಾರ ಚಳುವಳಿ ನಡೆಸುವ ಕುರಿತು ಇನ್ನೂ ದಿನಾಂಕ ಅಂತಿಮಗೊಳಿಸಿಲ್ಲ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಹೇಳಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಜ.4ರಂದು ಅಸಹಕಾರ ಚಳುವಳಿ ನಡೆಸಲು ನಿರ್ಧರಿಸಲಾಗಿತ್ತು. ಈ ಮಧ್ಯೆ ಬಿಜೆಪಿಯವರು ಕೂಡ ಜ.12ರಂದು ಜನಜಾಗೃತಿ ಸಭೆ ನಡೆಸಲು ಮುಂದಾಗಿದ್ದಾರೆ. ಶಾಂತಿ ಸುವ್ಯವಸ್ಥೆಯ ಹಿನ್ನೆಲೆಯಲ್ಲಿ ಮತ್ತು ವಾತಾವರಣ ತಿಳಿಯಾಗುವವರೆಗೆ ಅಂದರೆ 10 ದಿನದ ಮಟ್ಟಿಗೆ ಈ ಎರಡೂ ಕಾರ್ಯಕ್ರಮವನ್ನು ಮುಂದೂಡುವಂತೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸಲಿದ್ದೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News