ಬಂದ್ಗೆ ಬೆಂಬಲ ಇಲ್ಲ: ಜಯ ಕರ್ನಾಟಕ
Update: 2020-02-12 15:03 GMT
ಉಡುಪಿ, ಫೆ.12: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಫೆ.13ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ನೀಡುವುದಿಲ್ಲ ಎಂದು ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ತಿಳಿಸಿದ್ದಾರೆ.
ಈ ಬೇಡಿಕೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲ ಇದೆ. ಆದರೆ ಬಂದ್ ಮಾಡುವುದರಿಂದ ಜನಸಾಮಾನ್ಯರ ಜೀವನಕ್ಕೆ ಹೊಡೆತ ಬೀಳುವುದರಿಂದ ಈ ರೀತಿಯ ಯಾವುದೇ ಬಂದ್ಗೆ ನಾವು ಬೆಂಬಲ ನೀಡು ವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.