ಎಸೆಸ್ಸೆಲ್ಸಿ ಪರೀಕ್ಷೆ ಮುಂದೂಡಲು ಸಿಎಫ್ಐ ಮನವಿ
Update: 2020-06-22 16:55 GMT
ಮಂಗಳೂರು, ಜೂ.22: ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇಂತಹಾ ಸಂದರ್ಭದಲ್ಲಿ ಎಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸದೆ ಮುಂದೂಡುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾ ಸಮಿತಿಯ ನಿಯೋಗವು ದ.ಕ.ಜಿಲ್ಲಾಧಿಕಾರಿ ಹಾಗೂ ಡಿಡಿಪಿಐ ಮತ್ತು ತಾಲೂಕೂ ಶಿಕ್ಷಣಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದೆ.
ಜೂ.25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ. ಇದನ್ನು ಮರುಪರಿಶೀಲಿಸಬೇಕು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕು ಎಂದು ಸಿಎಫ್ಐ ಆಗ್ರಹಿಸಿದೆ.
ಈ ಸಂದರ್ಭ ಸಿಎಫ್ಐ ರಾಜ್ಯ ಸಮಿತಿ ಸದಸ್ಯರಾದ ಮುಹಮ್ಮದ್ ಸಾದಿಕ್, ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್, ವಲಯಾಧ್ಯಕ್ಷೆ ಮುರ್ಷಿದಾ ಹಾಗೂ ಸದಸ್ಯರಾದ ಜಬ್ಬಾರ್, ಇಹ್ತಿಶಾಮ್, ಅಶ್ರಫ್, ಸರಫುದ್ದೀನ್, ಅರಫಾತ್, ಸಲ್ಮಾನ್ ,ಶಾಕಿರಾ, ಶಝ್ರೀನಾ, ಅಮಾನಾ, ಆಯತ್ ಉಪಸ್ಥಿತರಿದ್ದರು.