​ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ

Update: 2020-06-27 07:13 GMT

ಬೆಂಗಳೂರು, ಜೂ.27: ನಗರದ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ 23 ಎಕರೆ ಪ್ರದೇಶದಲ್ಲಿ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶನಿವಾರ ಬೆಳಗ್ಗೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಶ್ರೀ ನಂಜಾವಧೂತ ಸ್ವಾಮೀಜಿ, ಸುತ್ತೂರು ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News