ಎನ್ ಕೌಂಟರ್ ನಲ್ಲಿ ಹಿಝ್ಬುಲ್ ಕಮಾಂಡರ್ ಸಹಿತ ಮೂವರು ಉಗ್ರರ ಹತ್ಯೆ

Update: 2020-06-29 06:29 GMT

ಶ್ರೀನಗರ, ಜೂ.29: ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸು ಲಭಿಸಿದ್ದು, ಭದ್ರತಾ ಪಡೆಗಳು ಹಿಝ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸಹಿತ ಮೂವರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಮಾಡಿದ್ದಾರೆ.

ಸೋಮವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ನಲ್ಲಿ ಹಿಝ್ಬುಲ್ ಕಮಾಂಡರ್ ಮಸೂದ್ ಅಹ್ಮದ್ ಭಟ್ ಹಾಗೂ ಇತರ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಮಸೂದ್ ಸಾವಿನೊಂದಿಗೆ ಜಮ್ಮು ವಲಯದ ದೋಡಾ ಜಿಲ್ಲೆಯೀಗ ಉಗ್ರರಿಂದ ಮುಕ್ತವಾಗಿದೆ. ಅಹ್ಮದ್ ಆ ವಲಯದಲ್ಲಿ ಸಕ್ರಿಯನಾಗಿದ್ದ ಕೊನೆಯ ಉಗ್ರನಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ್ದವು. ಮೂವರು ಉಗ್ರರನ್ನು ಹತ್ಯೆಗೈದ ಬಳಿಕ ಪ್ರತಿಕ್ರಿಯಿಸಿದ ಸೇನೆ, ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ ರೈಫಲ್ ಹಾಗೂ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News