ಕಾಸರಗೋಡು: ನೂತನ ಜಿಲ್ಲಾ ಪೊಲೀಸ್ ಕೇಂದ್ರ ಉದ್ಘಾಟನೆ
Update: 2020-07-23 16:44 GMT
ಕಾಸರಗೋಡು: ಪಾರೆಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಕೇಂದ್ರವನ್ನು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದರು.
ಜಾಗತಿಕ ಗುಣಮಟ್ಟದ ತರಬೇತಿ ಪೊಲೀಸರಿಗೆ ನೀಡುವ ಉದ್ದೇಶದಿಂದ ತರಬೇತಿ ಕೇಂದ್ರ ನಿರ್ಮಿಸಲಾಗಿದೆ. ತರಬೇತಿಗಾಗಿ ಆಗಮಿಸುವ ಮಂದಿಗೆ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ವಿಜಯನ್ ಹೇಳಿದರು.
ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಮಧೂರು ಗ್ರಾಮಪಂಚಾಯತ್ ಅಧ್ಯಕ್ಷೆ ಮಾಲತಿ ಸುರೇಶ್, ಉಪಾಧ್ಯಕ್ಷ ದಿವಾಕರ ಆಚಾರ್ಯ, ಡಿ.ವೈ.ಎಸ್.ಪಿ. ಹರಿಶ್ಚಂದ್ರ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಸ್ವಾಗತಿಸಿ, ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಝೇವ್ಯರ್ ಸೆಬಾಸ್ಟಿನ್ ವಂದಿಸಿದರು.