ಉಡುಪಿ ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ
Update: 2020-07-29 15:06 GMT
ಉಡುಪಿ, ಜು.29: ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಮೃತ್ಯಂಜಯ ಜೋಶಿ ಅವರನ್ನು ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ವರ್ಗಾವಣೆಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ.
ಇವರಿಂದ ತೆರವಾದ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸ್ಥಾನಕ್ಕೆ ಕರ್ನಾಟಕ ಮೇಲ್ಮನವಿ ಟ್ರಿಬ್ಯೂನಲ್ ಸದಸ್ಯ, ಓಓಡಿ ಜಿಲ್ಲಾ ನ್ಯಾಯಾ ಧೀಶ ಸುಬ್ರಹ್ಮಣ್ಯ ಜೆ.ಎನ್. ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಲಾಗಿದೆ.