ಕಾಳಾವರ: ಉದ್ಯೋಗ ತರಬೇತಿ ಕಾರ್ಯಾಗಾರ
Update: 2020-08-20 13:12 GMT
ಕುಂದಾಪುರ, ಆ.20: ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಹಾಗೂ ಕಾಳಾವರ ಶ್ರೀವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಜ್ಯಮಟ್ಟದ ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡಿದರು. ಅಕಾಡೆಮಿಯ ಆಡಳಿತ ನಿರ್ದೇಶಕ ಪ್ರೇಮ್ ಪ್ರಸಾದ್ ಶೆಟ್ಟಿ ಮಾತನಾಡಿದರು. ಉನ್ನತಿ ಕೆರಿಯರ್ ಅಕಾಡೆಮಿಯ ವ್ಯಕ್ತಿತ್ವ ವಿಕಸನ ತರಬೇತುದಾರ ಜೈದೀಪ್ ಅಮೀನ್ ಕಾರ್ಯಾಗಾರ ನಡೆಸಿಕೊಟ್ಟರು.
ಐಕ್ಯೂಎಸಿ ಸಂಯೋಜಕ ಗಣೇಶ್ ಪೈ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಉಷಾದೇವಿ, ಉದ್ಯೋಗ ಅಧಿಕಾರಿ ಸಂತೋಷ್ ನಾಕ್ ಉಪಸ್ಥಿತರಿದ್ದರು. ಉದ್ಯೋಗ ಅಧಿಕಾರಿ ಡಾ.ಸುಬ್ರಹ್ಮಣ್ಯ ವಂದಿಸಿದರು.