ಉದ್ಯಮಶೀಲತಾಭಿವೃದ್ಧಿ ತರಬೇತಿ

Update: 2020-08-21 14:53 GMT

ಉಡುಪಿ, ಆ.21: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಬೆಂಗಳೂರು, ಸಿಡಾಕ್ ಧಾರವಾಡ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇವರು ಸಂಯುಕ್ತವಾಗಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನ (ಬಿವಿಟಿ) ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಆಯ್ದ 25 ನಿರುದ್ಯೋಗಿಗಳಿಗೆ ಆರು ದಿನಗಳ ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಇದೇ ತಿಂಗಳ 24ರಿಂದ 29ರವರೆಗೆ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮವನ್ನು ಆ. 24ರ ಬೆಳಗ್ಗೆ 10:30 ಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉದ್ಘಾಟಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಹಾಗೂ ಇಲಾಖೆ ಮತ್ತು ಸಿಡಾಕ್‌ನ ಜಿಲ್ಲಾ ಜಂಟಿ ನಿರ್ದೇಶಕ ಅರವಿಂದ ಬಾಳೇರಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News