ಹಕ್ಕೊತ್ತಾಯ : ಪಜೀರ್ ಜಂಕ್ಷನ್ ನಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

Update: 2020-08-27 17:16 GMT

ಕೊಣಾಜೆ : ಕೇಂದ್ರದ ಜನವಿರೋಧಿ ನೀತಿಯನ್ನು ಖಂಡಿಸಿ, ಅಖಿಲ ಭಾರತ ಮಟ್ಟದ 16 ಹಕ್ಕೊತ್ತಾಯಗಳೊಂದಿಗೆ ಪಜೀರು ಗ್ರಾಮದಲ್ಲಿ ಸಿಪಿಐಎಂ ಬೆಂಬಲಿತ ಕಟ್ಟಡ ಕಾರ್ಮಿಕರ ಸಂಘಟನೆಯ (CWFI) ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ , ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ನಾಯಕ ಜಯಂತ್ ನಾಯ್ಕ್ ಮಾತನಾಡಿದರು.

ಸಭೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಜನಾರ್ದನ್ ಕುತ್ತಾರ್, ಕಾರ್ಯದರ್ಶಿ ಚಂದ್ರಹಾಸ ಪಿಲಾರ್, ಕಾರ್ಮಿಕ ಮುಂದಾಳು ಇಬ್ರಾಹಿಂ ಮದಕ, ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ರಾಮಚಂದ್ರ ಪಜೀರ್, ಶರೀಫ್ ಅಸೈಗೋಳಿ, ನವೀನ್ ಕುತ್ತಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News