ತಣ್ಣೀರುಬಾವಿ ಕಡಲತೀರ ಅಭಿವೃದ್ಧಿಗೆ ಕ್ರಮ: ಶಾಸಕ ಭರತ್ ಶೆಟ್ಟಿ

Update: 2020-08-30 12:38 GMT

ಮಂಗಳೂರು, ಆ.30: ತಣ್ಣೀರುಬಾವಿಯ ಕಡಲ ತೀರವನ್ನು 5 ಕೋ.ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರೊಂದಿಗೆ ತಣ್ಣೀರುಬಾವಿ ಕಡಲತೀರದಲ್ಲಿ ಅಭಿವೃದ್ಧಿಯಾಗಲಿರುವ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕರಾವಳಿ ತೀರದ ಅನೇಕ ಬೀಚುಗಳಲ್ಲಿ ತಣ್ಣೀರುಬಾವಿ ಕಡಲ ತೀರಕ್ಕೆ ತನ್ನದೇ ಆದ ಆಕರ್ಷಣೆ ಇದೆ. ಈ ಬೀಚ್ ಅನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ರಾಜ್ಯ, ದೇಶದ ಪ್ರವಾಸಿಗರನ್ನು ಆಕರ್ಷಿಸಿ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳ ಲಾಗಿದೆ. ಆ ನಿಟ್ಟಿನಲ್ಲಿ ಯೋಜನಾ ವರದಿ ತಯಾರಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರದ ಪ್ರವಾಸೋದ್ಯಮ ಇಲಾಖೆಯ ಮೂಲಕ 5 ಕೋ.ರೂ. ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಮಿತ್ರಾ ಕರಿಯ, ಸುನೀತಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News