ಉಡುಪಿ: ಪ್ರಾಕೃತಿಕ ಪರಿಹಾರ ನಿಧಿಯಿಂದ ಪರಿಹಾರ ವಿತರಣೆ

Update: 2020-09-02 12:56 GMT

ಉಡುಪಿ, ಸೆ.2: ಇತ್ತೀಚೆಗೆ ಕಾಲುಜಾರಿ ತೋಡಿಗೆ ಬಿದ್ದು ಮೃತಪಟ್ಟ ಉಡುಪಿ ನಗರಸಭಾ ವ್ಯಾಪ್ತಿಯ ಕಕ್ಕುಂಜೆ ವಾರ್ಡ್ ನಿವಾಸಿ ಗುಲಾಬಿ ಎಂಬವರ ಕುಟುಂಬಕ್ಕೆ ಪ್ರಾಕೃತಿಕ ಪರಿಹಾರ ನಿಧಿಯಿಂದ ಮಂಜೂರಾದ 5 ಲಕ್ಷ ರೂ. ಪರಿಹಾರ ಚೆಕ್‌ನ್ನು ಶಾಸಕ ಕೆ.ರಘುಪತಿ ಟ್ ಸೆ.2ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಸಹ ಸಂಚಾಲಕ ಕಿಶೋರ್ ಆಂಬಾಗಿಲು, ಬೂತ್ ಅಧ್ಯಕ್ಷ ಕಿರಣ್ ಪೂಜಾರಿ, ಪ್ರವೀಣ್, ಪ್ರಶಾಂತ್ ಆರ್.ಕೋಟ್ಯಾನ್, ಗಣೇಶ್ ಶೇಟ್, ಪ್ರತಿಮಾ ನಾಯಕ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕ ವಿಶ್ವನಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News