ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಶಿಕ್ಷಕಿಗೆ ಸನ್ಮಾನ

Update: 2020-09-05 08:37 GMT

ಉಡುಪಿ, ಸೆ.5: ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಕಾರ್ಕಳದ ನಳಿನಿ ಆಚಾರ್ಯ ಇವರನ್ನು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶನಿವಾರ ಗೌರಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ನಮ್ಮ ಬಾಳಿಗೆ ದೀವಿಗೆಯಾದ, ನಮ್ಮ ಇಡೀ ಬದುಕನ್ನು ರೂಪಿಸಿದ ಶಿಕ್ಷಕರೆಲ್ಲರನ್ನೂ ಸ್ಮರಿಸೋಣ. ಉತ್ತಮ ಸಮಾಜದ ರೂಪಕರಾದ ಶಿಕ್ಷಕರ ಋಣ ನಮ್ಮ ಮೇಲಿದೆ. ಹೀಗಾಗಿ ಶಿಕ್ಷಕರನ್ನು ಗೌರಸೋಣ ಎಂದರು.

ಈ ಸಂದರ್ಭದಲ್ಲಿ ರಾಜ್ಯ ನಾಯಕಿ ಸುರೇಖ ಚಂದ್ರಹಾಸ, ಅಪ್ಪಿ, ಮಂಗಳೂರು ಉತ್ತರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಹಿರಿಯಡ್ಕ ಬ್ಲಾಕ್ ಅಧ್ಯಕ್ಷೆ ಸಂಧ್ಯಾ ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷೆ ಗೋಪಿ ನಾಯ್ಕ, ವಂಡ್ಸೆ ಬ್ಲಾಕ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಮಾಜಿ ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಮೆನನ್, ಪ್ರಭಾ ಕಾರ್ಕಳ, ಸುಗುಣ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News