ಮಂಗಳೂರು: ಶಿಕ್ಷಕ ಯಾಕೂಬ್‌ಗೆ ರಾಷ್ಟ್ರಪ್ರಶಸ್ತಿ ಪ್ರದಾನ

Update: 2020-09-05 15:30 GMT

ಮಂಗಳೂರು, ಸೆ. 5: ಈ ವರ್ಷದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರು ಅವರಿಗೆ ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವರ್ಚುವೆಲ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಉಪಸ್ಥಿತರಿದ್ದರು. ಯಾಕೂಬ್ ಅವರ ಸಾಧನೆಗಳ ಬಗ್ಗೆ ಕಿರುಚಿತ್ರವನ್ನು ಈ ಸಂದರ್ಭ ಪ್ರದರ್ಶಿಸಲಾಯಿತು.

ಮಂಗಳೂರಿನ ಜಿಪಂ ಸಭಾಂಗಣದಲ್ಲಿ ವೀಡಿಯೋ ಕಾನ್ಫೆರೆನ್ಸ್ ಹಾಲ್ನಲ್ಲಿ ಯಾಕೂಬ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಿದರು. ಬಳಿಕ ಕೇಂದ್ರ ಸರಕಾರದ ಪರವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಯಾಕೂಬ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ದ.ಕ.ಜಿಪಂ ಸಿಇಒ ಡಾ. ಸೆಲ್ವಮಣಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಉಪಸ್ಥಿತರಿದ್ದರು.

ರಾಜ್ಯದಲ್ಲೇ ಮೊದಲ ಬಾರಿಗೆ ಗಣಿತ ಪ್ರಯೋಗಾಲಯವನ್ನು ನಡ ಸರಕಾರಿ ಶಾಲೆಯಲ್ಲಿ ಸ್ಥಾಪಿಸಿ ಗಣಿತವನ್ನು ಸುಲಭವಾಗಿ ಮಕ್ಕಳಿಗೆ ಕಲಿಸುವಲ್ಲಿ ಯಶಸ್ವಿಯಾಗಿರುವ ಯಾಕೂಬ್ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವೀಡಿಯೋಗಳನ್ನು ಹಂಚಿದ್ದಾರೆ. ರಾಜ್ಯದಲ್ಲೇ ಮಾದರಿಯಾಗಿ ಈ ಗಣಿತ ಪ್ರಯೋಗಾಲಯ ಮೂಡಿಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News