ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಸನ್ಮಾನ
Update: 2020-09-08 14:36 GMT
ಬಂಟ್ವಾಳ, ಸೆ.8: ದ.ಕ. ಜಿಲ್ಲಾಮಟ್ಟದ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಬೆಳ್ತಂಗಡಿ ವಲಯದ ಶಿಕ್ಷಕರನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ಐಒ) ಪಾಣೆಮಂಗಳೂರು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಪ್ರಾಥಮಿಕ ಶಾಲೆ (ಕಿರಿಯ ವಿಭಾಗ)ದ ರಕ್ತೇಶ್ವರಿ ಪದವು ಶಾಲೆಯ ಚೈತ್ರ ಪ್ರಭಾ ಶ್ರೀಶಂ, ಪ್ರಾಥಮಿಕ ಶಾಲೆ (ಹಿರಿಯ ವಿಭಾಗ)ದ ಕುಂಜತ್ತೋಡಿ ಶಾಲೆಯ ಸಬೀನಾ ಮತ್ತು ಪ್ರೌಢಶಾಲಾ ವಿಭಾಗದ ಕೊಕ್ರಾಡಿ ಶಾಲೆಯ ಅಕ್ಕಮ್ಮ ಅವರನ್ನು ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು.
ಈ ಸಂದರ್ಭ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ರಿಯಾಝ್ ಲಾಯಿಲ, ಎಸ್ಐಒ ದ.ಕ. ಜಿಲ್ಲಾ ಕಾರ್ಯದರ್ಶಿಗಳಾದ ರಿಝ್ವೌನ್ ಅಝ್ಹರಿ, ಮುತಹ್ಹರ್ ಬೋಳಂಗಡಿ, ಎಸ್ಐಒ ಪಾಣೆಮಂಗಳೂರು ಘಟಕಾಧ್ಯಕ್ಷ ತಮೀಝ್ ಅಲಿ ಕಾರಾಜೆ, ಕಾರ್ಯದರ್ಶಿ ಮುಬಾರಿಶ್ ಚೆಂಡಾಡಿ, ಕ್ಯಾಂಪಸ್ ಕಾರ್ಯದರ್ಶಿ ಸಲ್ವಾನ್ ಬೋಳಂಗಡಿ ಉಪಸ್ಥಿತರಿದ್ದರು.