ದನ ಸಾಗಾಟ ಆರೋಪದಲ್ಲಿ ಹಲ್ಲೆ ಪ್ರಕರಣ: ಬಜರಂಗದಳ ಕಾರ್ಯಕರ್ತರ ಬಂಧನ

Update: 2020-09-10 16:25 GMT

ಕಾರ್ಕಳ, ಸೆ.10: ದನ ಸಾಗಾಟದ ಆರೋಪದಲ್ಲಿ ಈದು ಗ್ರಾಮದ ಗುಮ್ಮೆಟ್ಟು ನಿವಾಸಿ, ಕೂಲಿ ಕಾರ್ಮಿಕ ಸುಜಯ್ ದೇವಾಡಿಗ(30) ಎಂಬವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಕಾರ್ಯಕರ್ತರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಇಂದು ಬಂಧಿಸಿದ್ದಾರೆ.

ಯೋಗೀಶ್ ಯಾನೆ ಮುನ್ನಾ, ರವಿ ಆಚಾರ್ಯ, ಅಶೋಕ್ ಯಾನೆ ಅಭಿ ಬಂಧಿತ ಆರೋಪಿಗಳು. ಇವರು ಸೆ.8ರಂದು ಸಂಜೆ 7ಗಂಟೆ ಸುಮಾರಿಗೆ ಜಂಗೊಟ್ಟು ಮಂಗಳ ಫಾರಂ ಬಳಿ ರಸ್ತೆಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಸುಜಯ್ ದೇವಾಡಿಗರನ್ನು ತಡೆದು ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಹಲ್ಲೆಯಿಂದ ಗಾಯಗೊಂಡಿದ್ದ ಸುಜಯ್ ದೇವಾಡಿಗ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿ ಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ದೂರಿನಲ್ಲಿ ತಿಳಿಸಿದ ಮೂವರನ್ನು ನಾವು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News