ಮಾಸ್ಕ್ ಹಾಕಿ ಎಂದಿದ್ದಕ್ಕೆ ಮಾರ್ಷಲ್ ಮೇಲೆ ಹಲ್ಲೆ ಆರೋಪ: ಇಬ್ಬರ ಬಂಧನ

Update: 2020-10-02 16:50 GMT

ಬೆಂಗಳೂರು, ಅ.2: ಕೊರೋನ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿಸಿದ್ದಕ್ಕೆ ಬಿಬಿಎಂಪಿ ಮಾರ್ಷಲ್ ಮೇಲೆಯೇ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಲದೇವಿ ಗ್ರಾಮದ ಅರುಣ್(26) ಹಾಗೂ ಜಗದೀಶ್(28) ಎಂದು ಗುರುತಿಸಲಾಗಿದೆ. ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಓಡಾಡುತ್ತಿದ್ದ ಆರೋಪಿಗಳು ಮಾಸ್ಕ್ ಧರಿಸಿರಲಿಲ್ಲ. ಅದೇ ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಮಾರ್ಷಲ್ ಒಬ್ಬರು ಆರೋಪಿಗಳನ್ನು ತಡೆದು ಪ್ರಶ್ನಿಸಿದ್ದರು. ದಯವಿಟ್ಟು ಮಾಸ್ಕ್ ಹಾಕಿಕೊಂಡು ಓಡಾಡಿ ಎಂದು ಹೇಳಿದ್ದರು. ದಂಡ ಪಾವತಿಸುವಂತೆಯೂ ತಿಳಿಸಿದ್ದರು ಎಂದು ಕೆ.ಆರ್.ಪುರ ಪೊಲೀಸರು ಹೇಳಿದರು.

‘ಮಾರ್ಷಲ್ ಜೊತೆ ವಾಗ್ವಾದ ನಡೆಸಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಸಹ ಮಾಡಿದರು. ಈ ಸಂಬಂಧ ಮಾರ್ಷಲ್ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿಗಳನ್ನು ಬಂಧಿಸಲಾಗಿದೆ' ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News