ಹವಾಲಾ ದಂಧೆ ಆರೋಪ: ಇಬ್ಬರ ಬಂಧನ

Update: 2020-10-09 17:24 GMT

ಬೆಂಗಳೂರು, ಅ.9: ಹವಾಲಾ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ರಾಣಾ ಸಾಮ್ಲಾ, ಚೇತನ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ನಗರ್ತಕಪೇಟೆಯ ಪಿಎಂ ಎಂಟರ್‍ಪ್ರೈಸಸ್ ಅಂಗಡಿಯಲ್ಲಿ ಇಬ್ಬರು ಅನಧಿಕೃತವಾಗಿ ಸರಕಾರದ ಯಾವುದೇ ಪರವಾನಿಗೆ ಇಲ್ಲದೆ ಸಂಘಟಿತ ರೀತಿಯಲ್ಲಿ ಲಕ್ಷಗಟ್ಟಲೆ ಹಣವನ್ನು ತಮ್ಮ ವಶದಲ್ಲಿಟ್ಟುಕೊಂಡು ಸರಕಾರಕ್ಕೆ ತೆರಿಗೆ ಪಾವತಿಸದೆ ಹಣವನ್ನು ಹವಾಲಾ ಮೂಲಕ ಬೇರೆಯವರಿಗೆ ವರ್ಗಾವಣೆ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತರಿಂದ ಮೊಬೈಲ್ ಜಪ್ತಿ ಮಾಡಿ ತನಿಖೆ ಮುಂದುವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News