ಕೆಥೊಲಿಕ್ ಸಭಾದಿಂದ ಸಮಾಜದ ಎಲ್ಲ ವರ್ಗದ ಜನರಿಗೂ ಸೇವೆ: ಬಿಷಪ್ ಲೋಬೊ

Update: 2020-10-26 13:22 GMT

ಉಡುಪಿ, ಅ.26: ಸಂಘಟನೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರುವ ಕೆಲಸವನ್ನು ಕೆಥೊಲಿಕ್ ಸಭಾದ ಮೂಲಕ ನಿರಂತರ ನಡೆಸಿ ಕೊಂಡು ಬರಲಾಗುತ್ತಿದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಉಡುಪಿ ಶೋಕ ಮಾತಾ ಇಗರ್ಜಿಯ ಸಭಾಂಗಣದಲ್ಲಿ ರವಿವಾರ ನಡೆದ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವಾರ್ಷಿಕ ಮಹಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೆಥೊಲಿಕ್ ಸಭಾ ಸಂಘಟನೆ ಕಳೆದ ಎಂಟು ವರ್ಷಗಳಿಂದ ಸಮಾಜದಲ್ಲಿ ಉತ್ತಮ ಸೇವೆಯನ್ನು ನೀಡುವ ಮೂಲಕ ದೇಶದಲ್ಲಿಯೇ ಮಾದರಿ ಯಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಸಂಘಟನೆ ನೀಡಿದ ಸೇವೆ ಶ್ಲಾಘನಾರ್ಹವಾಗಿದ್ದು ಈ ಮೂಲಕ ಸಮಾಜದ ಎಲ್ಲಾ ವರ್ಗದ ಜನರಿಗೆ ಸೇವೆ ನೀಡಿದೆ. ಸಮು ದಾಯದ ಅಭಿವೃದ್ದಿಯ ನಿಟ್ಟಿನಲ್ಲಿ ಈ ಸೇವೆ ಮುಂದುವರೆಯಲಿ ಎಂದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವ ಕಾರ್ಕಳ ಮಾತನಾಡಿ, ಕೆಥೊಲಿಕ್ ಸಭಾ ಸಂಘಟನೆ ಇಂದು ದೇಶದಲ್ಲಿಯೇ ಪ್ರಖ್ಯಾತಿ ಪಡೆದಿರುವುದಕ್ಕೆ ಅದು ನೀಡುತ್ತಿರುವ ನಿಸ್ವಾರ್ಥ ಸೇವೆಯೇ ಕಾರಣ. ಸಮಾಜದಲ್ಲಿ ಸಮುದಾಯದ ವ್ಯಕ್ತಿಗಳು ಉನ್ನತ ಹುದ್ದೆಗಳನ್ನು ಪಡೆಯುವತ್ತ ಇನ್ನಷ್ಟು ಪ್ರಯತ್ನ ಮುಂದುವರೆಸಬೆೀಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬರಹಗಾರ ರಿಚಾರ್ಡ್ ದಾಂತಿ ಪಾಂಬೂರ್ ಅವರಿಗೆ ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡ ಲಾಯಿತು. ದಿ.ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯಲ್ಲಿ ವಿಜೇತರಾದವ ರಿಗೆ ಬಹುಮಾನ ವಿತರಣೆ ಮತ್ತು 2020-21ನೇ ವರ್ಷದ ಡೈರಕ್ಟರಿಯ ಅಾವರಣ ನೆರವೇರಿಸಲಾಯಿತು.

ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ರೋಬರ್ಟ್ ಮಿನೇಜಸ್ ವಹಿಸಿದ್ದರು. ಹಿಂದಿನ ಸಾಲಿನ ವಾರ್ಷಿಕ ಮಹಾಸಭೆಯ ವರದಿಯನ್ನು ಸಹ ಕಾರ್ಯದರ್ಶಿ ಗ್ರೆಗೋರಿ ಪಿ.ಕೆ. ಡಿಸೋಜ, ವಾರ್ಷಿಕ ವರದಿಯನ್ನು ಕಾರ್ಯ ದರ್ಶಿ ಸಂತೋಷ್ ಕರ್ನೆಲಿಯೊ, ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿ ಕಾರಿ ಜೆರಾಲ್ಡ್ ರೊಡ್ರಿಗಸ್, ಮಾನಸ ಸಂಸ್ಥೆಯ ವರದಿಯನ್ನು ಹೆನ್ರಿ ಮಿನೇಜಸ್, ಸಶಕ್ತ ಸಮುದಾಯ ಟ್ರಸ್ಟ್ ವರದಿಯನ್ನು ಆಲಿಸ್ ರೊಡ್ರಿಗಸ್ ಮಂಡಿಸಿದರು.

ಕೆಥೊಲಿಕ್ ಸಭಾ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ನಿಯೋಜಿತ ಅಧ್ಯಕ್ಷ ಮೇರಿ ಡಿಸೋಜ, ಸಶಕ್ತ ಸಮುದಾಯ ಟ್ರಸ್ಟ್ ಸಂಚಾಲಕ ವಾಲ್ಟರ್ ಸಿರಿಲ್ ಪಿಂಟೊ, ವಲಯಾಧ್ಯಕ್ಷರುಗಳಾದ ಮೇಬಲ್ ಡಿಸೋಜ ಕುಂದಾಪುರ, ರೋಸಿ ಬಾರೆಟ್ಟೊ ಕಲ್ಯಾಣಪುರ, ಸೊಲೋಮನ್ ಆಲ್ವಾರಿಸ್ ಕಾರ್ಕಳ, ಐಡಾ ಕರ್ನೆಲಿಯೋ ಶಿರ್ವ, ರೊನಾಲ್ಡ್ ಆಲ್ಮೇಡಾ ಉಡುಪಿ ಉಪಸ್ಥಿತರಿದ್ದರು. ಎಡ್ವರ್ಡ್ ಲಾರ್ಸನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News