ನ. 8: ಯಕ್ಷಗಾನ ಅಕಾಡಮಿಯ ಪ್ರಶಸ್ತಿ ಪ್ರದಾನ

Update: 2020-11-02 16:44 GMT

ಮಂಗಳೂರು, ನ.2: ಕರ್ನಾಟಕ ಯಕ್ಷಗಾನ ಅಕಾಡಮಿಯ 2019ನೆಯ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನ.8ರಂದು ತುಳು ಅಕಾಡಮಿಯ ಕಲಾಭವನದಲ್ಲಿ ಜರಗಲಿದೆ.

ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಕರ ದಾಮ್ಲೆ, ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಾದ ಉಬರಡ್ಕ ಉಮೇಶ ಶೆಟ್ಟಿ, ಕುರಿಯ ಗಣಪತಿ ಶಾಸ್ತ್ರಿ ಮತ್ತು ಪುಸ್ತಕ ಬಹುಮಾನ ಪುರುಸ್ಕೃತರಾದ ಗುರುದೇವ ಪ್ರಕಾಶನ, ದಿ.ಒಡಿಯೂರು ಹೊಸ್ತೋಟ ಮಂಜುನಾಥ ಭಾಗವತರ ಪರವಾಗಿ ಕೃಷ್ಣ ಪ್ರಕಾಶ ಉಳಿತ್ತಾಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಗೌರವ ಪ್ರಶಸ್ತಿ ಪುರಸ್ಕೃತರಿಗೆ 50,000 ರೂ. ಮತ್ತು ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ 25,000 ರೂ, ಪುಸ್ತಕ ಬಹುಮಾನ ಪುರಸ್ಕೃತರಿಗೆ 25,000 ರೂ. ಗಳ ಮೊತ್ತವನ್ನು ನೀಡಲಾಗುವುದು ಎಂದು ಸದಸ್ಯ ಸಂಚಾಲಕ ಕದ್ರಿ ನವನೀತ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News