ಅಲಿಬಾಗ್ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ ಅರ್ನಬ್ ಗೋಸ್ವಾಮಿ

Update: 2020-11-09 11:44 GMT

ಮುಂಬೈ: 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರಿಂದ ಕಳೆದ ವಾರ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಇಂದು ಅಲಿಬಾಗ್ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ  ಎಂದು ಎಎನ್ಐ ವರದಿ ಮಾಡಿದೆ.

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗೋಸ್ವಾಮಿ ಅವರನ್ನು ಮಹಾರಾಷ್ಟ್ರದ ಸಿಐಡಿ ತಂಡವು ಕಳೆದ ವಾರ ವಶಕ್ಕೆ ಪಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News