ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಗೆ ಪೊಲೀಸರಿಂದ ತಡೆ

Update: 2020-11-10 12:14 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.10: ಆರ್‍ಆರ್ ನಗರ ಉಪಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿ ಮುನಿರತ್ನ ಉಪಚುನಾವಣೆ ಫಲಿತಾಂಶದಲ್ಲಿ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಮುಂದಾದರು. ಈ ವೇಳೆ ಪೊಲೀಸರು ತಡೆಯೊಡ್ಡಿದ ಪ್ರಸಂಗ ಜರುಗಿತು.

ಮಂಗಳವಾರ ಮತ ಎಣಿಕೆ ಕೇಂದ್ರವಾದ ಜ್ಞಾನಾಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಸಂಭ್ರಮಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಗೆ ತಡೆಯೊಡ್ಡಿ, ಶಾಂತವಾಗಿರುವಂತೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News