ತಣ್ಣೀರುಬಾವಿ: ಗೃಹರಕ್ಷಕ ದಳದಿಂದ ಸ್ವಚ್ಛತಾ ಕಾರ್ಯ

Update: 2020-11-10 16:23 GMT

ಮಂಗಳೂರು, ನ.10: ತಣ್ಣೀರುಬಾವಿಯ ಫಾತಿಮಾ ಬೀಚ್‌ನ ಕಡಲತೀರದಲ್ಲಿ ದ.ಕ. ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ಜಿಲ್ಲಾ ಪೌರ ರಕ್ಷಣಾ ಪಡೆಯಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ರಾಣಾಯಾಮ, ಯೋಗ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಮತ್ತು ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್‌ವಾರ್ಡನ್ ಡಾ.ಮುರಳಿ ಮೋಹನ್ ಚೂಂತಾರು ಮಾತನಾಡಿ, ಕಡಲತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳು ಮೀನುಗಳ ಸಹಿತ ಅನೇಕ ಜೀವ ಸಂಕುಲದ ರಕ್ಷಣೆಗೆ ಮಾರಕವಾಗಿದೆ ಎಂದರು.

ಪ್ಲಾಸ್ಟಿಕ್‌ನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ ಜಾಗೃತಿ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸುನಿಲ್‌ ಕುಮಾರ್, ದಿವಾಕರ್, ಸುನಿಲ್, ನಿಶಾಲ್, ದುಶ್ಯಂತ್ ರೈ, ಅಂಜನ್, ಸರಸ್ವತಿ, ಕವಿತಾ ಹಾಗೂ ಇನ್ನಿತರ ಗೃಹರಕ್ಷಕ/ಗೃಹರಕ್ಷಕಿಯರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News