ಬೆಂಗಳೂರಿನ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ: ಮೂವರ ಬಂಧನ

Update: 2020-11-11 14:32 GMT

ಬೆಂಗಳೂರು, ನ.11: ಮೈಸೂರು ರಸ್ತೆಯ ರೇಖಾ  ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ ಸಂಬಂಧ ಮೂವರನ್ನು ಬ್ಯಾಟರಾಯನಪುರ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ‌

ಗೋದಾಮಿನ ಮಾಲಕರಾದ ಸಜ್ಜನ್ ರಾಜ್ ಮತ್ತು ಪತ್ನಿ ಕಮಲಾ, ಪುತ್ರ ಅನಿಲ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಪರವಾನಗಿ ಪಡೆಯದೆ ಈ ಕಾರ್ಖಾನೆ ನಡೆಸುತ್ತಿದ್ದ ಆರೋಪದ ಮೇಲೆ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಘಟನೆಯಿಂದ ಸುಮಾರು 4 ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಿದ್ದು, ಹಿರಿಯ ಅಧಿಕಾರಿಗಳು ಆರೋಪಿಗಳ ವಿಚಾರಣೆ ಬಳಿಕ ವರದಿಯನ್ನು ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News