ಕುಂದಾಪುರ: ಆರ್.ಎನ್.ಶೆಟ್ಟಿ ಜೂ.ಕಾಲೇಜಿನಲ್ಲಿ ಮಧುಮೇಹ ಶಿಬಿರ

Update: 2020-11-13 12:35 GMT

ಕುಂದಾಪುರ, ನ.13: ಲಯನ್ಸ್ ಕ್ಲಬ್ ಕುಂದಾಪುರ, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀವಿನಾಯಕ ಕ್ಲಿನಿಕ್ ಕುಂದಾಪುರ ಇವರ ಸಹಯೋಗದಲ್ಲಿ ಉಚಿತ ಮಧುಮೇಹ ಪರೀಕ್ಷಾ ಶಿಬಿರವನ್ನು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಕಲ್ಪತರು, ಘಟಕದ ಕಾರ್ಯದರ್ಶಿ ಪ್ರೊ. ರಾಜೇಂದ್ರ, ಲಯನ್ಸ್ ಕ್ಲಬ್‌ನ ರಾಜೀವ ಕೋಟ್ಯಾನ್, ವೇಣುಗೋಪಾಲ್‌ಶೆಟ್ಟಿ, ಉದ್ಯಮಿ ರಾಧಾಕೃಷ್ಣ, ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುಂದಾಪುರ ವಿನಾಯಕ ಕ್ಲಿನಿಕಲ್ ಲ್ಯಾಬ್‌ನವರು ಮಧುಮೇಹ ಪರೀಕ್ಷೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News