ಮೇಘಾ ಲೋಕ್ ಅದಾಲತ್ : ಒಂದೇ ದಿನದಲ್ಲಿ ಒಟ್ಟು 2546 ಪ್ರಕರಣ ಇತ್ಯರ್ಥ
ಉಡುಪಿ, ಡಿ.20: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.19ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಆಯೋಜಿಸಲಾದ ಮೇಘಾ ಲೋಕ್ ಅದಾ ಲತ್ನಲ್ಲಿ ಒಂದೇ ದಿನ ಒಟ್ಟು 2546 ಪ್ರಕರಣಗಳನ್ನು ಇತ್ಯರ್ಥ ಪಡಿಸ ಲಾಯಿತು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ-34, ಚೆಕ್ಕು ಅಮಾನ್ಯ ಪ್ರಕರಣ- 74, ಬ್ಯಾಂಕ್/ಹಣ ವಸೂಲಾತಿ ಪ್ರಕರಣ-9, ಎಂ.ವಿ.ಸಿ ಪ್ರಕರಣ-190, ಎಂ.ಎಂಆರ್.ಡಿ. ಆಕ್ಟ್ ಪ್ರಕರಣ-40, ಸಿವಿಲ್ ಪ್ರಕರಣ-127, ಇತರೇ ಕ್ರಿಮಿನಲ್ ಪ್ರಕರಣ-1967 ಹಾಗೂ ವ್ಯಾಜ್ಯ ಪೂರ್ವ ದಾವೆ-105 ಪ್ರಕರಣ ಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ ಒಟ್ಟು 8,29,28,098 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ, ಕಾರ್ಕಳ, ವಕೀಲರ ಸಂಘ, ಉಡುಪಿ, ಕುಂದಾಪುರ, ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ನ್ನು ಯಶಸ್ವಿ ಗೊಳಿಸಲಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಜೆ.ಎನ್.ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.