ಕೆಥೊಲಿಕ್ ಸಭಾದಿಂದ ವೃದ್ಧಾಶ್ರಮದಲ್ಲಿ ಕ್ರಿಸ್ಮಸ್ ಆಚರಣೆ

Update: 2020-12-24 15:06 GMT

ಉಡುಪಿ, ಡಿ.24: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಬ್ರಹ್ಮಾವರದ ಕರುಣಾಲಯ ವೃದ್ಧಾಶ್ರಮದಲ್ಲಿ ಗುರುವಾರ ಅಲ್ಲಿನ ಹಿರಿಯ ನಾಗರಿಕರೊಂದಿಗೆ ಕ್ರಿಸ್ಮಸ್ ಸಂಭ್ರಮವನ್ನು ಆಚರಿಸಲಾಯಿತು.

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್‌ನ ಅಧ್ಯಕ್ಷ ರೊಬರ್ಟ್ ಮಿನೇಜಸ್ ಅವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೇವರು ಮನುಷ್ಯ ರೂಪದಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದರು. ಅವರ ಸಂಪೂರ್ಣ ಜೀವನವನ್ನು ಬಡಬಗ್ಗರ, ದೀನ ದಲಿತರ, ಶೋಷಿತ ವರ್ಗದ ಜನರ ಸೇವೆಗೆ ಮುಡಿಪಾಗಿಟ್ಟು ಅರ್ಥಪೂರ್ಣಗೊಳಿಸಿದರು ಎಂದರು.

ಈ ಆದರ್ಶವನ್ನು ಪಾಲಿಸುವುದು ನಮ್ಮ ಧರ್ಮವಾಗಿದೆ. ಈ ನಿಟ್ಟಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ವೃದ್ಧರು, ಅಶಕ್ತರು ಅನಾಥರು, ಶೋಷಿತ ವರ್ಗವನ್ನು ಭೇಟಿ ಮಾಡಿ ಅವರ ಮುಖದಲ್ಲಿ ನಗುವನ್ನು ಕಾಣುವುದೇ ನಿಜವಾದ ಕ್ರಿಸ್ಮಸ್ ಹಬ್ಬ ಎಂದು ರೋಬರ್ಟ್ ನುಡಿದರು.

ಸಂಘಟನೆ ವತಿಯಿಂದ ವೃದ್ಧಾಶ್ರಮದ ನಿವಾಸಿಗಳಿಗೆ ಅಗತ್ಯವಿರುವ ವಿವಿಧ ವಸ್ತುಗಳನ್ನು ಹಾಗೂ ಕ್ರಿಸ್ಮಸ್ ಹಬ್ಬದ ಕುಸ್ವರನ್ನು ವಿತರಿಸಲಾ ಯಿತು. ಅಲ್ಲದೇ ವೃದ್ಧಾಶ್ರಮಕ್ಕೆ ಸಹಾಯಧನವನ್ನು ಕೂಡ ನೀಡಲಾಯಿತು.

ಈ ಸಂದರ್ಭದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ನ ಉಪಾಧ್ಯಕ್ಷ ರೊನಾಲ್ಡ್ ಆಲ್ಮೇಡಾ, ಕಾರ್ಯದರ್ಶಿ ಸಂತೋಷ್ ಕರ್ನೆಲಿಯೊ, ಸಹ ಕಾರ್ಯದರ್ಶಿ ಗ್ರೆಗರಿ ಡಿಸೋಜಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಸಹ ಕೋಶಾಧಿಕಾರಿ ಹೆರಿಕ್ ಗೊನ್ಸಾಲ್ವಿಸ್, ಕಲ್ಯಾಣಪುರ ವಲಯಾಧ್ಯಕ್ಷೆ ರೋಜಿ ಬಾರೆಟ್ಟೊ, ಕೋಶಾಧಿಕಾರಿ ಗ್ಯಾರಿಫಿಲ್ಡ್ ಉರ್ಬಾನ್ ಲೂವಿಸ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News