ಎಂಆರ್ ಜಿ ಸಂಸ್ಥೆಯಿಂದ ಆರ್ಥಿಕ ಸಹಾಯ ಧನ ವಿತರಣೆ ಕಾರ್ಯಕ್ರಮ

Update: 2020-12-28 14:38 GMT

ಮಂಗಳೂರು, ಡಿ.28:ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಯವರ ಜನ್ಮದಿನದ ಅಂಗವಾಗಿ  ಹಮ್ಮಿಕೊಂಡ ಪ್ರಕಾಶಾಭಿನಂದನಾ  ಕಾರ್ಯ ಕ್ರಮದಲ್ಲಿ  ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸೇರಿದಂತೆ 500ಕ್ಕೂ ಅಧಿಕ ಅಶಕ್ತರಿಗೆ ಒಂದು ಕೋಟಿ ರೂ ಅಧಿಕ ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನ ದಲ್ಲಿಂದು ನಡೆಯಿತು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್  ಶೆಟ್ಟಿ, ಬದುಕಿನಲ್ಲಿ ಎದುರಾಗುವ ಕಷ್ಟಗಳಿಗೆ ಹೆದರದೆ ಧೈರ್ಯವಾಗಿ ಎದುರಿಸಬೇಕಾಗಿದೆ‌. ನಾನು ಕಷ್ಟದ ಹಾದಿಯಲ್ಲಿಯೇ ಬೆಳೆದು ಬಂದವನು. ಕಷ್ಟದ ಅನುಭವ ನನಗಿದೆ. ಒಬ್ಬರು ಇನ್ನೊಬ್ಬರಿಗೆ ಪರಸ್ಪರ ಸಹಾಯ ಮಾಡುತ್ತಾ ಸಾಗಿ ದರೆ ಯಾವುದೇ ಕಷ್ಟವನ್ನು ಎದುರಿಸಬಹುದು ಎಂದು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

ಸಮಾರಂಭದಲ್ಲಿ ಶಾಸಕ ಭರತ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ , ಬಂಟರ ಯಾನೆ ನಾಡವರ ಮಾತ್ರ್ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಬಂಟ ಸಮಾಜದ ಗಣ್ಯರಾದ ಎ.ಜೆ.ಶೆಟ್ಟಿ, ಸದಾನಂದ ಶೆಟ್ಟಿ, ಜಯರಾಮ ಹೆಗ್ಡೆ, ಪುರು ಷೋತ್ತಮ ಶೆಟ್ಟಿ, ರತ್ನಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಸಂತೋಷ್ ಶೆಟ್ಟಿ, ಮನೋಹರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಫಲಾನುಭವಿಗಳ ಪಟ್ಟಿಯನ್ನು ಡಾ.ಎಮ್. ಮೋಹನ ಆಳ್ವ  ವಾಚಿಸಿ, ಸನ್ಮಾರ್ಗ ದಲ್ಲಿ ಸಂಪಾದಿಸಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಶ್ರೇಷ್ಠ  ಕಾರ್ಯ ಎಂದು ಶುಭ ಹಾರೈಸಿಸರು. ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ನಿತೀಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News