ಎಐಸಿಸಿ ಕಾರ್ಯದರ್ಶಿಯಾಗಿ ಐವನ್ ಅಧಿಕಾರ ಸ್ವೀಕಾರ

Update: 2020-12-30 17:28 GMT

ಮಂಗಳೂರು, ಡಿ.30: ಅಖಿಲ ಭಾರತ ಕಾಂಗ್ರೆಸ್ (ಎಐಸಿಸಿ) ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿಸೋಜ ದೆಹಲಿಯ ಪಕ್ಷದ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಆಡಳಿತ) ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಐವನ್ ಡಿಸೋಜ ಅವರಿಗೆ ಕೇರಳ ರಾಜ್ಯದ ಹೊಣೆಗಾರಿಕೆ ನೀಡಲಾಗಿದ್ದು, ಈಗಾಗಲೇ ತಿರುವನಂತಪುರಂಗೆ ತೆರಳಿ, ಪಕ್ಷದ ನಾಯಕರ ಜೊತೆ ಚರ್ಚಿಸಿ, ಮುಂದಿನ ವಿಧಾನಸಭಾ ಚುನಾವಣೆ ಬಗ್ಗೆ ರೂಪುರೇಖೆಗಳನ್ನು ತಯಾರಿಸಿದ್ದಾರೆ. ದೆಹಲಿಯಲ್ಲಿ ಪಕ್ಷದ ನಾಯಕರಾದ ಎ.ಕೆ.ಆಂಟನಿ, ವಿನ್ಸೆಂಟ್ ಜಾರ್ಜ್, ಮುರಳೀಧರ ಮತ್ತು ಕೇರಳ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಥಾರೀಖ್ ಅನ್ವರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News