ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ

Update: 2021-01-02 15:36 GMT

ಉಡುಪಿ, ಜ.2: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಯಲ್ಲಿ ರಕ್ತನಿಧಿ ಕೇಂದ್ರಗಳಿಗೆ ಹೊಸದಾಗಿ ಅನುಮೋದನೆಯಾಗಿರುವ ಶುಶ್ರೂಷಕರ (1) ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದ ಸಂಸ್ಥೆಯಿಂದ 3 ವರ್ಷ ಅಥವಾ ಅದಕ್ಕಿಂತ ಅಧಿಕ ಅವಧಿಯ ನರ್ಸಿಂಗ್ ಪಾಸಾದ ಪ್ರಮಾಣ ಪತ್ರ ಹಾಗೂ 2 ವರ್ಷ ರಕ್ತನಿಧಿ ಕೇಂದ್ರದಲ್ಲಿ ಕೆಲಸ ಮಾಡಿದ ಅನುವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಯನ್ನು ಆಹ್ವಾನಿಸಲಾಗಿದೆ. ಮಾಸಿಕ 11,500 ರೂ. ವೇತನ ನೀಡಲಾಗುವುದು.

ಅದೇ ರೀತಿ ಗ್ರೂಪ್-ಡಿ(1) ಹುದ್ದೆಗೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ 8,000 ರೂ. ವೇತನ ನೀಡಲಾಗುವುದು. ಈ ಎರಡು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಜ.8ರಂದು ಬೆಳಗ್ಗೆ 10:30ರಿಂದ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯ ರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News