ಉಡುಪಿ: ಪತ್ರಿಕಾ ದಿನಾಚರಣೆ ಪ್ರಯುಕ್ತ ಮಲಬಾರ್ ಗೋಲ್ಡ್‌ನಿಂದ ಹಿರಿಯ ಪತ್ರಕರ್ತರಿಗೆ ಸನ್ಮಾನ

Update: 2021-07-01 11:43 GMT

ಉಡುಪಿ, ಜು.1: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ಶಾಖೆಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ರಿಗೆ ಸನ್ಮಾನ ಕಾರ್ಯಕ್ರಮವನ್ನು ಗುರುವಾರ ಉಡುಪಿ ಪ್ರೆಸ್‌ಕ್ಲಬ್‌ ನಲ್ಲಿ ಆಯೋಜಿಸಲಾಗಿತ್ತು.

ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಕುರ್ಯ ಹಾಗೂ ಸುವರ್ಣ ಟಿವಿ ವರದಿಗಾರ ಶಶಿಧರ ಮಾಸ್ತಿಬೈಲು ಅವರನ್ನು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರಹ್ಮಾನ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಕೀಲ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿವೇಕಾನಂದ ಪನಿಯಾಲ, ವಾರ್ತಾಧಿಕಾರಿ ಎಂ.ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿ ಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್‌ನ ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರೀಟಿ ಉಸ್ತುವಾರಿ ತಂಝೀಮ್ ಶಿರ್ವ ಮೊದಲಾ ದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News