ಜು.6: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸ

Update: 2021-07-03 13:59 GMT

ಉಡುಪಿ, ಜು.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜು.6ರಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

ಜು.6ರಂದು ಬೆಳಗ್ಗೆ 9:30ಕ್ಕೆ ಮಂಗಳೂರಿನಿಂದ ಉಡುಪಿಗೆ ಪ್ರಯಾಣಿಸುವ ಡಿಕೆಶಿ 10:15ಕ್ಕೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ವೀಕ್ಷಣೆ ಮಾಡಿ, 11 ಗಂಟೆಗೆ ಮಲ್ಪೆಗೆ ಆಗಮಿಸಿ ಜಿಲ್ಲೆಯ ಮೀನುಗಾರ ಸಮುದಾ ಯದ ಕುಂದುಕೊರತೆಗಳ ಅಧ್ಯಯನ ಸಭೆಯಲ್ಲಿ ಭಾಗವಹಿಸಲಿರುವರು.

ಸಂಜೆ 4 ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕೋವಿಡ್ ಸಹಾಯ ಹಸ್ತದ ಬಗ್ಗೆ ನಡೆಯುವ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಕುಂದಾಪುರಕ್ಕೆ ತೆರಳಿ ವಾಸ್ತವ್ಯ ಹೂಡುವರು. ಮರುದಿನ ಬೆಳಗ್ಗೆ 8:30ಕ್ಕೆ ಕುಂದಾಪುರ ದಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News