ನಲ್ಲೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅಧಿಕಾರಿಯ ನೇಮಕ

Update: 2021-07-03 15:30 GMT

ಉಡುಪಿ, ಜು.3: ಕಾರ್ಕಳ ತಾಲೂಕು ನಲ್ಲೂರು ಗ್ರಾಪಂ ಅಧ್ಯಕ್ಷ ಸ್ಥಾನವು ರಾಜೀನಾಮೆಯಿಂದ ತೆರವಾಗಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿ ಸ್ಥಾನವನ್ನು ಭರ್ತಿ ಮಾಡಲು ಕಾರ್ಕಳ ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಅನಂತನಾರಾಯಣ ಭಟ್ಕಳ್ ಇವರನ್ನು ಚುನಾವಣೆ ನಡೆಸಲು ಅಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ನಲ್ಲೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ನೇಮಕಗೊಂಡ ಅಧಿಕಾರಿ ಚುನಾವಣೆ ನಡೆಸಲು ದಿನಾಂಕ ವನ್ನು ಗೊತ್ತುಪಡಿಸಿ, ಸದಸ್ಯರಿಗೆ ಸಾಕಷ್ಟು ಕಾಲಾವಕಾಶ ನೀಡಿ ಸಭೆಯ ತಿಳುವಳಿಕೆ ನೋಟೀಸು ಜಾರಿ ಮಾಡಿ ಪಂಚಾಯತ್‌ ರಾಜ್ ಅಧಿನಿಯಮದಂತೆ ಚುನಾವಣೆ ನಡೆಸಿ ಅಧ್ಯಕ್ಷರ ಆಯ್ಕೆ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News