ಬಬ್ಬುಕಟ್ಟೆ ಹಿರಾ ವಿಮೆನ್ಸ್ ಕಾಲೇಜಿನಲ್ಲಿ ಲಸಿಕಾ ಅಭಿಯಾನ

Update: 2021-07-05 11:44 GMT

ಮಂಗಳೂರು : ದಕ್ಷಿಣ ಕನ್ನಡ ಆರೋಗ್ಯ ಮತ್ತು ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಹಿರಾ ವಿಮೆನ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಮತ್ತು ಹಿರಾ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಉಚಿತ ಕೋವಿಡ್-19 ಲಸಿಕಾ ಶಿಬಿರವನ್ನು ನಡೆಸಲಾಯಿತು.

ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿದ್ಯಾಸಾಗರ್  ಮತ್ತು ಅವರ ಸಿಬ್ಬಂದಿ ವರ್ಗದ    ಸಹಕಾರ ದೊಂದಿಗೆ ಕಾರ್ಯಕ್ರಮ ನಡೆಸಲಾಯಿತು. ಶಾಂತಿ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಜ. ಅಬ್ದುಲ್ ಕರೀಂ, ವ್ಯವಸ್ಥಾಪಕರಾದ ಜ. ಸಮೀರ್ ಹಾಗೂ ಕಾಲೇಜಿನ ಪ್ರಾಂಶುಪಾಲೆ ಭಾರತಿ ಎಂ.ಆರ್., ಎನ್.ಎಸ್.ಎಸ್. ಸಂಯೋಜಕಿ ರುಕ್ಸಾನ, ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಪ್ರಮೀಳ ಕೆ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News