ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2021-07-08 15:45 GMT

ಕಾಪು, ಜು.8: ಅನಾರೋಗ್ಯದಿಂದ ಬಳಲುತ್ತಿದ್ದ ಏಣಗುಡ್ಡೆ ಗ್ರಾಮದ ಅಗ್ರಹಾರ ನಿವಾಸಿ ರಾಮ (58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.7ರಂದು ರಾತ್ರಿ ವೇಳೆ ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಾನಸಿಕ ಖಿನ್ನತೆಯಿಂದ ಮಾನಸಿಕವಾಗಿ ನೊಂದು ಜು.5ರಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಯ ಗ್ರಾಮದ ಕುಂಟಾಡಿ ದಂಡಿಬೆಟ್ಟು ನಿವಾಸಿ ಗಣೇಶ ಪೂಜಾರಿ ಎಂಬವರು ಜು.7ರಂದು ರಾತ್ರಿ ಚಿಕಿತ್ಸೆ ಫಲಕಾರಿ ಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಕಾಲು ಗಂಟು ನೋವಿನಿಂದ ಮಾನಸಿಕವಾಗಿ ನೊಂದು ಜೂ.30 ರಂದು ಮನೆಯ ಟಾಯ್ಲೆಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡ್ದಿ ಹಾರಾಡಿ ಗ್ರಾಮದ ಕುಕ್ಕುಡೆ ನಿವಾಸಿ ಶೀನ ಪೂಜಾರಿ(75) ಎಂಬವರು ಜು.7ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News