ತುಳುಕೂಟದಿಂದ ಜಯಕರ ಶೆಟ್ಟಿ ಇಂದ್ರಾಳಿಗೆ ಸನ್ಮಾನ

Update: 2021-07-12 17:21 GMT

ಉಡುಪಿ, ಜು.12: ತುಳುಕೂಟದ ವತಿಯಿಂದ ಸೋಮವಾರ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾದ ಸ್ನೇಹಕೂಟದಲ್ಲಿ ರಾಜ್ಯ ಸಹಕಾರ ಮಹಾ ಮಂಡಲದ ನಿರ್ದೇಶಕರಾಗಿ ಆಯ್ಕೆಯಾದ ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಸಮ್ಮಾನಿಸಲಾಯಿತು.

ಒಬ್ಬರ ನೋವಿಗೆ ಇನ್ನೊಬ್ಬರು ಸ್ಪಂದಿಸುವ ಗುಣವನ್ನು ಕೇವಲ ಮನುಷ್ಯರಿಗೆ ಮಾತ್ರ ದೇವರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಕೈಲಾದ ಸೇವೆಯನ್ನು ಸಮಾಜದಲ್ಲಿರುವ ಬಡವರಿಗೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಚೈತನ್ಯ, ಮಾಜಿ ಅಧ್ಯಕ್ಷ ವಿ.ಜಿ.ಶೆಟ್ಟಿ, ಹಿರಿಯ ನ್ಯಾಯವಾದಿ ಶಾಂತರಾಮ ಶೆಟ್ಟಿ, ತುಳು ಅಕಾಡೆಮಿಯ ಸದಸ್ಯೆ ತಾರಾ ಆಚಾರ್ಯ, ಪತ್ರಕತರ್ ಶ್ರೀಕಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಹಾಸ್ಯ ಸಾಹಿತಿ ಸಂಧ್ಯಾ ಶೆಣೈ ಅಭಿನಂದನಾ ಭಾಷಣ ಮಾಡಿದರು. ತುಳು ಕೂಟದ ಉಪಾಧ್ಯಕ್ಷ ಮುಹ್ಮಮದ್ ಮೌಲಾ ಸ್ವಾಗತಿಸಿದರು. ರತ್ನಾಕರ್ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News