​ಆರೋಗ್ಯ ಸಚಿವ ಡಾ.ಸುಧಾಕರ್ ಜು.14ರಂದು ಉಡುಪಿ ಜಿಲ್ಲಾ ಪ್ರವಾಸ

Update: 2021-07-13 15:53 GMT

ಉಡುಪಿ, ಜು.13: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಜು.14ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ 9:30ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಅಲ್ಲಿಂದ ನೇರವಾಗಿ ರಸ್ತೆ ಮೂಲಕ ಕಾರ್ಕಳ ತಾಲೂಕು ಬೆಳ್ಮಣ್ಣುಗೆ ತೆರಳುವರು. ಅಲ್ಲಿ ಬೆಳಗ್ಗೆ 10:45ಕ್ಕೆ ವಾತ್ಸಲ್ಯ ಮಕ್ಕಳ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, 11:30ಕ್ಕೆ ಹೆಬ್ರಿ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಆಕ್ಸಿಜನ್ ಜನರೇಟರ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಹೆಬ್ರಿಯಿಂದ ಉಡುಪಿಗೆ ಆಗಮಿಸುವ ಸಚಿವರು ಅಪರಾಹ್ನ 2:15ಕ್ಕೆ ಉಡುಪಿಯ ನೂತನ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣ ಸ್ಥಳ ಭೇಟಿ, ಪರಿವೀಕ್ಷಣೆ. ಅಲ್ಲಿಂದ ಕಾಪು ತೆರಳುವ ಡಾ.ಸುಧಾಕರ್ ಸಂಜೆ 4:00ಕ್ಕೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂರು ಹೊಸ ಅಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸುವರು. ಬಳಿಕ ಅಲ್ಲಿಂದ ಮಂಗಳೂರಿಗೆ ತೆರಳುವ ಅವರು ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News