ಆಸ್ಕರ್ ಫೆರ್ನಾಂಡೀಸ್ ಶೀಘ್ರ ಗುಣಮುಖರಾಗಲು ಕಾಂಗ್ರೆಸ್ ಕಾರ್ಯಕರ್ತರಿಂದ ಪೂಜೆ
ಉಡುಪಿ, ಜು.22: ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರು ಶೀಘ್ರ ಗುಣಮುಖ ರಾಗಲೆಂದು ಹಾರೈಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಥಬೀದಿ ಯಲ್ಲಿರುವ ಶ್ರೀ ಅನಂತ್ವೇಶ್ವರ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಅರ್ಚಕರಾದ ವಿದ್ವಾನ್ ವೇದವ್ಯಾಸ ಐತಾಳರು ವಿಶೇಷ ಪೂಜೆಯೊಂದಿಗೆ ಶೀಘ್ರ ಗುಖಮುಖರಾಗುವಂತೆ ಪ್ರಾರ್ಥಿಸಿ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಿ. ನರಸಿಂಹಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಹರೀಶ್ ಕಿಣಿ, ಮುರಲಿ ಶೆಟ್ಟಿ, ಕುಶಲ ಶೆಟ್ಟಿ, ಅಣ್ಣಯ್ಯ ಸೇರಿಗಾರ್, ಪ್ರಖ್ಯಾತ ಶೆಟ್ಟಿ, ಸತೀಶ್ ಅಮೀನ್ ಪಡುಕೆರೆ, ಯತೀಶ್ ಕರ್ಕೆರ, ರಮೇಶ್ ಕಾಂಚನ್, ಜನಾರ್ದನ್ ಭಂಡಾರ್ಕರ್, ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಹೆಬ್ಬಾರ್, ಹರೀಶ್ ಶೆಟ್ಟಿ ಪಾಂಗಾಳ, ಸದಾಶಿವ ಕಟ್ಟಗುಡ್ಡೆ, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಗಣೇಶ್ ನೆರ್ಗಿ, ಉಪೇಂದ್ರ ಮೆಂಡನ್, ಗಣೇಶ್ರಾಜ್ ಸರಳೆಬೆಟ್ಟು, ಕೃಷ್ಣ ಹೆಬ್ಬಾರ್, ಜಯ ಶೆಟ್ಟಿ ಬನ್ನಂಜೆ, ಮಾಧವ ಬನ್ನಂಜೆ ಉಪಸ್ಥಿತರಿದ್ದರು.