ಅಮೀರ್ ತುಂಬೆ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಂತಾಪ

Update: 2021-07-23 15:19 GMT

ಮಂಗಳೂರು, ಜು.23: ಕರ್ನಾಟಕ ರಾಜ್ಯ ಇಂಟಕ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅಮೀರ್ ಅಹ್ಮದ್ ತುಂಬೆ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ.

ಅಮೀರ್ ತುಂಬೆ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ-ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಸಂಸದ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಮುಹಮ್ಮದ್ ಮಸೂದ್, ಮೊಯ್ದೀನ್ ಬಾವಾ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ವಸಂತ ಬಂಗೇರಾ, ಜೆ.ಆರ್.ಲೋಬೊ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಪಕ್ಷದ ಮುಖಂಡರಾದ ಕೋಡಿಜಾಲ್ ಇಬ್ರಾಹೀಂ, ಕಣಚೂರು ಮೋನು, ರಾಕೇಶ್ ಮಲ್ಲಿ, ಕಳ್ಳಿಗೆ ತಾರನಾಥ ಶೆಟ್ಟಿ, ಡಿಸಿಸಿ ಉಪಾಧ್ಯಕ್ಷ ಸದಾಶಿವ ಉಳ್ಳಾಲ, ಜಿ.ಎ. ಬಾವಾ, ಮುಹಮ್ಮದ್ ಮೋನು, ಹರಿನಾಥ್, ಶಶಿಧರ್ ಹೆಗ್ಡೆ, ಆರ್.ಕೆ. ಪೃಥ್ವಿರಾಜ್, ಮಿಥುನ್ ರೈ, ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೊ, ಮೆರಿಲ್ ರೇಗೋ, ಆಶೀತ್ ಪಿರೇರಾ, ಗಿರೀಶ್ ಆಳ್ವ, ಅಬ್ದುರ್ರವೂಫ್, ನವೀನ್ ಡಿಸೋಜ, ಬಿ.ಎಚ್. ಖಾದರ್, ಖಾದರ್ ಏರ್‌ಪೋರ್ಟ್, ಸುರೇಂದ್ರ ಕಂಬಳಿ, ಮುಹಮ್ಮದ್ ಕುಂಜತ್ತಬೈಲ್, ಶಬ್ಬೀರ್ ಎಸ್, ನಝೀರ್ ಬಜಾಲ್, ಪ್ರಕಾಶ್ ಶೆಟ್ಟಿ ತುಂಬೆ, ಚಂದ್ರಹಾಸ ಕರ್ಕೇರಾ, ನೀರಜ್‌ಚಂದ್ರ ಪಾಲ್, ಆರೀಫ್ ಬಂದರ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News