ಅಲ್ಪಸಂಖ್ಯಾತರಿಗೆ 2 ಲಕ್ಷ ರೂ. ಪ್ರೋತ್ಸಾಹಧನ: ಅರ್ಜಿ ಆಹ್ವಾನ

Update: 2021-08-02 14:48 GMT

ಮಂಗಳೂರು, ಆ.2: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ದ, ಜೈನ, ಸಿಖ್ ಹಾಗೂ ಪಾರ್ಸಿ ಸಮುದಾಯದವರಿಗೆ ಕೋರ್ಸ್‌ನ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷ ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಐಐಟಿ, ಐಐಐಟಿ, ಎನ್‌ಐಟಿ, ಐಐಎಂ, ಐಐಎಸ್‌ಇಆರ್, ಎಐಐಎಮ್‌ಎಸ್, ಎನ್‌ಎಲ್‌ಯು, ಐಎನ್‌ಐ ಮತ್ತು ಐಯುಎಸ್‌ಎಲ್‌ಎನಲ್ಲಿ ಪ್ರವೇಶ ಪಡೆದವರು ಈ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: dom.karnataka.gov.in  ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News