ಎಸ್‌ಕೆಪಿಎ ಉಡುಪಿ ವಲಯದಿಂದ ಕಾರ್ಯಾಗಾರ

Update: 2021-08-03 12:36 GMT

ಉಡುಪಿ, ಆ.3: ನೂತನ ತಂತ್ರಜ್ಞಾನವನ್ನು ಕಾಲಕಾಲಕ್ಕೆ ನಾವು ಅಳವಡಿಸಿಕೊಂಡರೆ ನಮ್ಮ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಬಹುದು ಎಂದು ಹಿರಿಯ ಸಂಪನ್ಮೂಲ ವ್ಯಕ್ತಿ ಎಸ್. ಜಗದೀಸನ್ ಕರೆ ನೀಡಿದ್ದಾರೆ.

ಕೊಡವೂರು ವಿಪ್ರಶ್ರೀ ಸಭಾಂಗಣದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಶಿಯೇಶನ್‌ನ ಉಡುಪಿ ವಲಯ ಹಮ್ಮಿಕೊಂಡ ಒಂದು ದಿನದ ವಿಡಿಯೋ ಎಡಿಟಿಂಗ್ ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೃಶ್ಯಮಾಧ್ಯಮ ಕ್ಷೇತ್ರ ನಿಜಕ್ಕೂ ಕ್ರಿಯಾತ್ಮಕ ಮತ್ತು ವೈವಿದ್ಯಮವಾದುದು ಎಂದವರು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಷಿಯೇಶನ್‌ನ ಜಿಲಾಧ್ಯಕ್ಸ ಕರಂದಾಡಿ ಶ್ರೀಧರ ಶೆಟ್ಟಿಗಾರ್ ಮಾತನಾಡಿ, ವೃತ್ತಿ ಉಳಿದರೆ ಮಾತ್ರ ಸಂಘಟನೆ. ಆದುದರಿಂದ ಸದಸ್ಯರಿಗೋಸ್ಕರ ಆಯೋಜಿಸುವ ಇಂತಹ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯ ಮಿತ್ರರು ಭಾಗವಹಿಸಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್. ಜಗದೀಸನ್‌ರನ್ನು ಗೌರವಿಸಲಾಯಿತು.ವಲಯಾಧ್ಯಕ್ಷ ಪ್ರಕಾಶ್ ಕೊಡಂಕೂರ್‌ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಪ್ರಸಾದ್ ಜತ್ತನ್, ಪ್ರಸನ್ನ ಕೊಡವೂರು ಉಪಸ್ಥಿತರಿದ್ದರು.

ಉಡುಪಿ ವಲಯದ ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸುಕೇಶ್ ಕೆ ಅಮೀನ್ ವಂದಿಸಿದರು. ರಾಘವನ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News