​ಆ.7ರಂದು ಸಚಿವ ಕೋಟ, ಸುನೀಲ್‌ ರಿಂದ ಅಹವಾಲು ಸ್ವೀಕಾರ

Update: 2021-08-06 14:38 GMT

ಉಡುಪಿ, ಆ.6: ಕರ್ನಾಟಕ ಸರಕಾರದ ಸಂಪುಟ ದರ್ಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆ.7ರಂದು ಬೆಳಗ್ಗೆ 7ರಿಂದ 9ರವರೆಗೆ ಕೋಟದ ತಮ್ಮ ಗೃಹಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಗಳನ್ನು ಸ್ವೀಕರಿಸಲಿದ್ದಾರೆ. ನಂತರ ಅವರು ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸುನೀಲ್‌ ಕುಮಾರ್: ಸಚಿವ ವಿ.ಸುನೀಲ್ ಕುಮಾರ್ ಅವರು ಶನಿವಾರ ಬೆಳಗ್ಗೆ 10 ಕ್ಕೆ ಉಡುಪಿಗೆ ಆಗಮಿಸಿ ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿ ಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. 11 ಗಂಟೆಗೆ ಮಣಿಪಾಲದ ಜಿಪಂ ಸಭಾಂಗಣ ದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅಪರಾಹ್ನ 1 ಕ್ಕೆ ಕಾರ್ಕಳಕ್ಕೆ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News